Monday, 1 December 2014

ಶರಿಯತ್ ಕೋರ್ಟ್ ಗಳಿಗೇ ಮಾನ್ಯತೆ ಇಲ್ಲ ಎಂದಾದ ಮೇಲೆ ಶರಿಯತ್ ಕಾನೂನಿನಡಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವ ದರ್ದೇಕೆ?

ಈ ದೇಶದಲ್ಲಿ ಸಂವಿಧಾನಕ್ಕೆ ಪರ್ಯಾಯವಾದ ಮತ್ತೊಂದು ಕಾನೂನು ಚಾಲ್ತಿಯಲ್ಲಿದ್ದರೂ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ದೇಶದ ಭದ್ರತೆಗೇ ಅಪಾಯವೊಡ್ಡುವ ಸ್ಥಿತಿ ಎದುರಾದಾಗ ಮಾತ್ರ ಅದರ ಬಗ್ಗೆ ಎಚ್ಚೆತ್ತುಕೊಳ್ಳುತ್ತೇವೆ. ಇಲ್ಲದಿದ್ದರೆ ಪರ್ಯಾಯ ಕಾನೂನಿನ ಪ್ರಕಾರ ಏನು ನಡೆದರೂ ಪಿಳಿಪಿಳಿ ನೋಡುತ್ತಾ ಕುಳಿತುಬಿಡುತ್ತೇವೆ. ಈ ಮಾತನ್ನು ಈಗೇಕೆ ಹೇಳಬೇಕಾಗಿದೆ ಎಂದರೆ ಪ್ರತಿಯೊಂದರಲ್ಲೂ ಪ್ರತ್ಯೇಕತೆಯಲ್ಲೇ ಜೀವನ ನಡೆಸುತ್ತಿರುವ ಅಲ್ಪಸಂಖ್ಯಾತರಿಗೆ ಶರಿಯತ್ ಕಾನೂನಿನ ಪ್ರತ್ಯೇಕ ಮ್ಯುಚುಯಲ್ ಫಂಡ್ ಪ್ರಾರಂಭವಾಗಿರುವುದರಿಂದ.

ಅವರಿಗಾಗಿಯೇ ಪ್ರತ್ಯೇಕ ವಿವಾಹ ಕಾಯ್ದೆ, ಅವರಿಗಾಗಿಯೇ ಪ್ರತ್ಯೇಕ ಅಪರಾಧ ಕಾಯ್ದೆ, ಅವರಿಗಾಗಿಯೇ ಪ್ರತ್ಯೇಕ ಬ್ಯಾಂಕ್, ಅವರಿಗಾಗಿಯೇ ಪ್ರತ್ಯೇಕ ಪಕ್ಷ ಹೀಗೆ ಎಣಿಸುತ್ತಿದ್ದರೆ ಪ್ರತ್ಯೇಕತೆಯ ಪಟ್ಟಿ ಇನ್ನೂ ಬೆಳೆಯುತ್ತಲೇ ಹೋಗುತ್ತದೆ. ಪ್ರತಿಯೊಂದರಲ್ಲೂ ಪ್ರತ್ಯೇಕತೆ ಬಯಸುವವರು ಈಗ ಮ್ಯುಚುಯಲ್ ಫಂಡ್ ಗೆ ಬಂದಿದ್ದಾರೆ. ಅದೂ ಶರಿಯತ್ ಪ್ರಕಾರ ಮಾಡಬೇಕಂತೆ! ಅವರೇನು ಕೇಳಿಲ್ಲ ಬಾಂಧವರನ್ನು ಮೆಚ್ಚಿಸಲು ನಮ್ಮದೇ ಎಸ್.ಬಿ.ಐ ಹಮ್ಮಿಕೊಂಡಿರುವ ಹೊಸ ಯೋಜನೆ!

ಪ್ರತ್ಯೇಕ ದೇಶ ಬೇಕು ಎಂದರು ಕೊಟ್ಟದ್ದು ಆಯಿತು. ಪ್ರತ್ಯೇಕ ವಿವಾಹ ಕಾಯ್ದೆ ಎಂದರು ಅಲ್ಪಸಂಖ್ಯಾತರ ಮತ ಗಿಟ್ಟುತ್ತದೆ ಎಂದು ಏನೂ ಹೇಳದೇ ಮೌನವಾಗಿದ್ದಾಯಿತು. ಪ್ರತ್ಯೇಕ ರಾಜ್ಯದಲ್ಲೂ ತಮ್ಮದೇ ವಿಚಿತ್ರ ಕಾನೂನು-ಕಟ್ಟಲೆ ಬೇಕು ಎಂದರು ದೇಶದ ಪಂಡಿತ-ಮಹಾತ್ಮರು ಅದಕ್ಕೂ ಒಪ್ಪಿದರು. ಹೀಗೆಯೇ ಕೇಳುತ್ತಾ ಹೋದಂತೆಲ್ಲಾ ಇಲ್ಲ ಎನ್ನದೇ ಕೊಟ್ಟಾಯಿತು. ಕಾಲ ಬದಲಾದಂತೆ ಕೇಳದೆಯೂ ಓಲೈಸುವ ಪದ್ಧತಿ ಜಾರಿ ಬಂತು. ಕೊಡುತ್ತಾ ಹೋದಂತೆಲ್ಲಾ ಕಿರುಚುವುದು ಹೆಚ್ಚಾಯಿತೇ ಹೊರತು ಎಲ್ಲರಲ್ಲೂ ಒಂದಾಗುವ ಭಾವನೆ ಮೂಡಲಿಲ್ಲ. ತಾವೂ ಈದೇಶದ ಪ್ರಜೆಗಳು, ತಮಗೂ ಈ ದೇಶದ ಸಂವಿಧಾನಾತ್ಮಕ ಕಾನೂನುಗಳು ಅನ್ವಯವಾಗುತ್ತವೆ ಹೊರತು ಧರ್ಮದ ಚೌಕಟ್ಟಿನಲ್ಲಿರುವ ಕಾನೂನು ಅನ್ವಯಿಸುವುದಿಲ್ಲ ಎಂದು ಅವರಿಗೆ ಅನ್ನಿಸಲೇ ಇಲ್ಲ...!

ಈ ದೇಶದಲ್ಲಿ ಏನಾಗುತ್ತಿದೆ? ಇಂತಹದ್ದೊಂದು ಪ್ರಶ್ನೆ ಕೇಳಲೇಬೇಕಿದೆ. ಏಕೆಂದರೆ ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಶರಿಯತ್ ಕೋರ್ಟ್ ಗಳ ಕುರಿತು ಮಹತ್ವದ ತೀರ್ಪನ್ನು ನೀಡಿತ್ತು. ಶರಿಯತ್ ’ಕೋರ್ಟ್’ ಗಳಿಗೆ ಕಾನೂನಿನ ಅಡಿಯಲ್ಲಿ ಮಾನ್ಯತೆಯೇ ಇಲ್ಲವೆಂಬುದು ಆ ತೀರ್ಪಿನ ಸಾರಾಂಶ. ಆದರೂ ಶರಿಯತ್ ಕಾನೂನಿನ ಪ್ರಕಾರ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಮ್ಯುಚುಯಲ್ ಫಂಡ್ ಪ್ರಾರಂಭಿಸಲಾಗುತ್ತಿದೆ.

ಶರಿಯತ್ ಕೋರ್ಟ್ ಗಳು ಹೊರಡಿಸುವ ಸೋ ಕಾಲ್ಡ್ ತೀರ್ಪುಗಳಿಂದ ರೋಸಿ ಹೋಗಿದ್ದ ಅದೆಷ್ಟೋ ಜನರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಪರಿಣಾಮ ದೇಶದ ಸಂವಿಧಾನಾತ್ಮಕ ಕಾನೂನಿಗೆ ಪರ್ಯಾಯವಾಗಿ ಕಾರ್ಯನಿರ್ವಹಿಸುತ್ತಿರುವ ಶರಿಯತ್ ಕೋರ್ಟ್ ಹಾಗೂ ಕೋರ್ಟ್ ಗಳು ವಿಧಿಸುವ ಫತ್ವಾಗಳಿಗೆ ಕಾನೂನು ಮಾನ್ಯತೆ ಇಲ್ಲವೆಂದು ಘಂಟಾಘೋಷವಾಗಿ ಸುಪ್ರೀಂ ತೀರ್ಪು ನೀಡಿದೆ. ಅದು ಫತ್ವಾಗೆ ಮಾತ್ರ ಸೀಮಿತವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ ಸುಪ್ರೀಂ ಕೋರ್ಟ್ ಹೇಳಿರುವುದು ಶರಿಯತ್ ಕೋರ್ಟ್ ಗಳು ಹೊರಡಿಸುವ ಫತ್ವಾಗಳಿಗಲ್ಲ ಸಂಪೂರ್ಣ ಶರಿಯತ್ ಕೋರ್ಟ್ ಗಳಿಗೆ. ಶರಿಯತ್ ಕೋರ್ಟ್ ಗಳಿಗೆ ಕಾನೂನು ಮಾನ್ಯತೆ ಇಲ್ಲ ಎಂದಾದ ಮೇಲೂ ಅದಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸುವುದಾದರೆ ಸ್ಥಳೀಯ ಪಂಚಾಯತ್ ಗಳು ಹೊರಡಿಸುವ ಕಾನೂನ ಪ್ರಕಾರವೂ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸಾಧ್ಯವೋ? ಪರಿಸ್ಥಿತಿ ಹೀಗಿರಬೇಕಾದರೆ ಕಾನೂನು ಮಾನ್ಯತೆಯೇ ಇಲ್ಲದ ಶರಿಯತ್ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸುವುದರ ದರ್ದೇನು?.

ಶರಿಯತ್ ಕೋರ್ಟ್ ಗಳ ಮೇಲಿದ್ದ ಗಂಭೀರ ಆರೋಪವೇ ಪರ್ಯಾಯ ನ್ಯಾಯಾಂಗ ವ್ಯವಸ್ಥೆಯಂತೆ ವರ್ತಿಸುತ್ತಿದೆ ಎಂಬುದು. ಮ್ಯುಚುಯಲ್ ಫಂಡ್ ಎನ್ನುವುದು ಎಷ್ಟೇ ಖಾಸಗಿ ವಿಷಯವಾದರೂ ಅದು ದೇಶದ ಆರ್ಥಿಕತೆಗೆ ಸಂಬಂಧಿಸಿದ ಸೂಕ್ಷ್ಮ ವಿಷಯ. ಅಂಥದ್ದರಲ್ಲಿ ಭಾರತದ ನ್ಯಾಯಾಂಗಕ್ಕೆ ಪರ್ಯಾಯ ನ್ಯಾಯಾಂಗದಂತೆ ವರ್ತಿಸುತ್ತಿರುವ ಶರಿಯತ್ ಕೋರ್ಟ್ ಗಳಿಂದ ರಚಿತವಾದ ಕಾನೂನಿಗೆ ಅನುಗುಣವಾಗಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವುದರಲ್ಲಿ ಅರ್ಥವಿದೆಯೇ?



ಇಷ್ಟಕ್ಕೂ ಎಸ್.ಬಿ.ಐ ಪ್ರಾರಂಭಿಸಿರುವ ಶರಿಯತ್ ಮ್ಯುಚುಯಲ್ ಫಂಡ್ ಯೋಜನೆ ಹೆಸರೇ ಹೇಳುವಂತೆ ಶರಿಯತ್ ಸಲಹಾ ಮಂಡಳಿಯ ಅಧೀನಕ್ಕೆ ಒಳಪಟ್ಟಿರುತ್ತದೆ.. ಅದರ ನಿರ್ವಹಣೆ ಶರಿಯತ್ ಕೋರ್ಟ್ ಗಳಲ್ಲಿರುವವರ ಅಣತಿಯಂತೆಯೇ ನಡೆಯಲಿದೆ. ಶರಿಯತ್ ಕೋರ್ಟ್ ಗಳು ಅಥವಾ ಧಾರ್ಮಿಕ ಮುಖಂಡರು ಅನುಮತಿ ನೀಡುವ ಕಂಪನಿಗಳಲ್ಲಿ ಮಾತ್ರ ಹೂಡಿಕೆ ಮಾಡಲು ಅವಕಾಶವಿರುತ್ತದೆ. ಹೂಡಿಕೆ ಮಾಡಿದ ನಂತರವೂ ಅದನ್ನು ಬಳಸುವುದಕ್ಕೂ ನಿಬಂಧನೆಗಳೂ ಇಲ್ಲದೇ ಇರಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮ್ಯುಚುಯಲ್ ಫಂಡ್ ನ ಹಣ ಯಾವುದಕ್ಕೂ ಬಳಕೆಯಾಗುವ ಸಾಧ್ಯತೆ ಇದೆ ಅಲ್ಲವೇ? ಇಸ್ಲಾಂ ನಲ್ಲಿ ಬಡ್ಡಿ ತೆಗೆದುಕೊಳ್ಳುವುದು, ಮದ್ಯ ವ್ಯಾಪಾರಕ್ಕೆ ಸಂಬಂಧಿಸಿದ್ದೇ ಮೊದಲಾದ ವ್ಯವಹಾರಗಳಲ್ಲಿ ಹೂಡಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಕೆಲವೊಂದು ವಿಷಯಗಳು ಸಮಾಜಕ್ಕೆ ಒಳಿತೆಂದೇ ಕಂಡರೂ, ಸರ್ಕಾರಿ ಸ್ವಾಮ್ಯದ ಇಡಿಯ ಒಂದು ಯೋಜನೆಯನ್ನು ಶರಿಯತ್ ಕಾನೂನಿನ ಆಧಾರದಲ್ಲಿ ರೂಪಿಸುವುದು ಪಾನ್ ಇಸ್ಲಾಂ, ಇಸ್ಲಾಂ ಬ್ರದರ್ ಹುಡ್ ಹೆಸರಿನಲ್ಲಿ ನಡೆಯುವ ಅದೆಷ್ಟೋ ವಿಚಾರಗಳ ದೃಷ್ಠಿಯಿಂದ ಭಾರತದ ಸಂವಿಧಾನಕ್ಕೆ ವಿರೋಧಿಯಾಗುವುದಿಲ್ಲ ಎಂಬುದಕ್ಕೆ ಖಾತ್ರಿ ಏನು?
ಧಾರ್ಮಿಕ ಸಂಘರ್ಷದಲ್ಲಿ ಇಸ್ಲಾಂ ನ ತೀವ್ರತೆಯನ್ನು ನೆನಪಿಸುವ ಇರಾಕ್ ನ ಐ.ಎಸ್.ಐ.ಎಸ್ ಸಂಘಟನೆಯ ಕಣ್ಣಮುಂದೆಯೇ ಇದೆ. ಇರಾಕ್ ನಲ್ಲಿ ತಮ್ಮದೇ ಕರೆನ್ಸಿ ಜಾರಿಗೆ ತರುವ ಮಟ್ಟಿಗೆ ವ್ಯವಸ್ಥೆಗೆ ಸೆಡ್ಡು ಹೊಡೆದು ಸದ್ದಿಲ್ಲದೇ ಹೇಗೆ ಪರ್ಯಾಯ ವ್ಯವಸ್ಥೆ ರೂಪಿಸುತ್ತಾರೆ ಎಂಬುದೂ ನಮಗೆ ಚೆನ್ನಾಗಿ ತಿಳಿದಿದೆ. ಇವೆಲ್ಲದ್ದೂ ಪಾನ್ ಇಸ್ಲಾಂ, ಅಥವಾ ಇಸ್ಲಾಂ ಬ್ರದರ್ ಹುಡ್ ಪರಿಣಾಮ ಬೀರಿದೆ ಎಂಬುದೂ ಪ್ರಮುಖ ಪ್ರಶ್ನೆಯಾಗಲಿವೆ.

ಇಸ್ಲಾಮ್ ಬ್ರದರ್ ಹುಡ್ ನ್ನು ವ್ಯಾಖ್ಯಾನಿಸಲು ಇರಾಕ್ ನ ಐ.ಎಸ್.ಐ.ಎಸ್ ನಿಂದ ಭಾರತಕ್ಕೆ ವಾಪಸ್ಸಾದ ಮುಂಬೈ ನ ಯುವಕನ ಪ್ರಕರಣ, ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್ ಧ್ವಜ ಹಾರಿಸಿದ್ದು, ತಮಿಳುನಾಡಿನಲ್ಲಿ ಟೀ ಶರ್ಟ್ ಗಳ ಮೇಲೆ ಧ್ವಜ ಇಸೀಸ್ ಧ್ವಜ ಪ್ರಿಂಟ್ ಆದಕ್ಕಿಂತ ಮತ್ತೊಂದು ಉದಾಹರಣೆ ಬೇಕಿಲ್ಲ. ಒಂದು ವೇಳೆ ಶರಿಯತ್ ಕೋರ್ಟ್ ನ ನಾನೂನು ಪ್ರಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಒಂದು ಯೋಜನೆಯೇ ಜಾರಿಗೆ ಬರುತ್ತದೆ ಎಂದಾರೆ ಅದೇ ಶರಿಯತ್ ಕೋರ್ಟ್ ಧರ್ಮದ ನೆಲೆಗಟ್ಟಿನಲ್ಲಿ ಒಪ್ಪುವ ಜಿಹಾದ್, ಭಯೋತ್ಪಾದನೆ, ಒಂದಕ್ಕಿಂತ ಹೆಚ್ಚು ಮದುವೆಯಂತಹ ವಿಷಯಗಳನ್ನೂ ಕಾನೂನು ಬದ್ಧ ಮಾಡಬೇಕಾಗುತ್ತದೆ. ಹಾಗೆ ಮಾಡಲು ಸಾಧ್ಯವೇ? ಅದು ಸಾಧ್ಯವಿಲ್ಲ ಎಂದರೆ ಶರಿಯತ್ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸಲು ಹೇಗೆ ಸಾಧ್ಯ?
ನೆನಪಿರಲಿ, ಮುಂಬೈ ದಾಳಿಯ ರುವಾರಿ, ಹಫೀಜ್ ಸಯ್ಯದ್, ಇದೇ ದಾಳಿಯಲ್ಲಿ ಅಪರಾಧ ಸಾಬೀತಾಗಿ ಗಲ್ಲಿಗೇರಿದ್ದ ಅಜ್ಮಲ್ ಕಸಬ್ ಅವರನ್ನು ಸಮರ್ಥಿಸಿಕೊಳ್ಳುತ್ತಿರುವುದೂ ಇದೇ ಧಾರ್ಮಿಕ ಚೌಕಟ್ಟು. ಏಕೆಂದರೆ ಅವರು ಧರ್ಮಕ್ಕಾಗಿ ಹೋರಾಟ ನಡೆಸಿ ವೀರಮರಣವನ್ನಪ್ಪಿದ್ದಾರೆ. ತನ್ನ ಧರ್ಮವನ್ನು ಬೆಳೆಸುವುದಕ್ಕೆ ಹೋರಾಡುವುದು ಧಾರ್ಮಿಕ ಕಾನೂನಿನಲ್ಲಿ ಪ್ರತಿಷ್ಠೆಯ ಪ್ರಶ್ನೆ. ಭಯೋತ್ಪಾದನೆ, ಧರ್ಮದ ಹೆಸರಿನಲ್ಲಿ ಇಂತಹ ಕೃತ್ಯಗಳನ್ನು ಭಾರತೀಯ ಮುಸ್ಲಿಮರು ಒಪ್ಪುವುದಿಲ್ಲ ಎಂದು ಸಮರ್ಥನೆ ನೀಡಬಹುದು ಆದರೆ ಭಾರತೀಯ ಮುಸ್ಲಿಮರು ಶರಿಯತ್ ನ್ನು ಒಪ್ಪುವುದಿಲ್ಲ ಎಂದು ಮಾತ್ರ ಹೇಳಲು ಸಾಧ್ಯವಿಲ್ಲ. ಶರಿಯತ್ ಕಾನೂನಿನಲ್ಲಿ ನಿಷೇಧಿಸುವ ಅಂಶಗಳನ್ನು ಹೊರತುಪಡಿಸಿ ಹಾಗೆಯೂ ಓರ್ವ ವ್ಯಕ್ತಿ ಹೂಡಿಕೆ ಮಾಡಬಹುದು. ಅದಕ್ಕೆ ಪ್ರತ್ಯೇಕ ಕಾನೂನು ಇರುವ ಮ್ಯೂಚುಯಲ್ ಫಂಡ್ ಅಗತ್ಯವೇನು?
ಒಂದು ಸರ್ವೇ ಪ್ರಕಾರ, ಜಾಗತಿಕ ಮಟ್ಟದಲ್ಲಿ ಇಸ್ಲಾಮಿಕ್ ಬ್ಯಾಂಕ್ ಗಳ ಆಸ್ತಿ ಒಟ್ಟು 1.8ಟ್ರಿಲಿಯನ್ ಡಾಲರ್ ನಷ್ಟಿದೆ. ಅಂದರೆ ಬರೊಬ್ಬರಿ 112 ಲಕ್ಷ ಕೋಟಿಯಷ್ಟಿದೆ. ಬೆಂಗಳೂರಿನ ಗ್ರಾಮಾಂತರ ಪ್ರದೇಶದ ಓರ್ವ ಮುಸ್ಲಿಮನಿಗೆ ತೊಂದರೆಯಾದರೆ ಅರಬ್ ರಾಷ್ಟ್ರದಲ್ಲಿರುವ ಮತ್ಯಾರೋ ವ್ಯಕ್ತಿ ಸಹಾಯಕ್ಕೆ ಧಾವಿಸುತ್ತಾರೆ. ಇದನ್ನು ತಪ್ಪು ಎಂದು ಹೇಳಲಾಗದು, ಆದರೆ ಒಂದು ವೇಳೆ ವಿದೇಶಿ ಮುಸ್ಲಿಮರು ಮ್ಯುಚುಯಲ್ ಫಂಡ್ ಗೆ ಹಣ ನೀಡಿ ಸದ್ದಿಲ್ಲದೇ ಆಡಳಿತ, ಆರ್ಥಿಕತೆಯ ಮೇಲೆ ಹಿಡಿದ ಸಾಧಿಸುವ ಹುನ್ನಾರವಿದ್ದರೆ ಈ ಶರಿಯತ್ ಕಾನೂನಿನ ಅಡಿ ಪ್ರಾರಂಭವಾಗುವ ಮ್ಯುಚುಯಲ್ ಫಂಡ್ ನಿಂದ ದೇಶದ ಭದ್ರತೆಗೇ ಅಪಾಯ ಎಂಬುದು ನಮಗೇಕೆ ಅರ್ಥವಾಗುತ್ತಿಲ್ಲ. ಇಷ್ಟೆಲ್ಲಾ ಇದ್ದರೂ ಶರಿಯತ್ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸಿದರೆ ಮುಂದೊಮ್ಮೆ ಭಾರತದ ಸಮಸ್ತ ಆರ್ಥಿಕತೆಯನ್ನು ಷರಿಯತ್ ಆಳುವುದಿಲ್ಲ ಎಂದು ನಂಬುವುದಾದರೂ ಹೇಗೆ? ಸರಿ ಎಲ್ಲವೂ ಸುಸೂತ್ರವಾಗಿಯೇ ನಡೆಯುತ್ತದೆ. ಒಂದು ವೇಳೆ ಶರಿಯತ್ ಕಾನೂನಿಗೆ ವಿರುದ್ಧವಾಗಿ ಹೂಡಿಕೆ ಮಾಡಿದಲ್ಲಿ ಆತನ ವಿರುದ್ಧ ಫತ್ವಾ ಹೊರಡಿಸಲಾಗುತ್ತದೆ ಎಂಬ ಅಂಶವೂ ಇದೆ. ಹಾಗಾದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಬೆಲೆ ಏನು?

ಇಷ್ಟಕ್ಕೂ ಶರಿಯತ್ ಕಾನೂನಿನಡಿಯಲ್ಲಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವಂತಹ ಘನ ಕಾರ್ಯ ಮಾಡಲು ಹೊರಟಿರುವ ಎಸ್.ಬಿ.ಐ ನೀಡುರುವ ಸ್ಪಷ್ಟನೆಯಾದರೂ ಏನು? " ಭಾರತದ ಮುಸ್ಲಿಂ ಜನಸಂಖ್ಯೆಯಲ್ಲಿ ಬಹುತೇಕರು ಬ್ಯಾಂಕಿಂಗ್ ವ್ಯವಸ್ಥೆಯಿಂದ ದೂರ ಉಳಿದಿದ್ದಾರೆ" ಏಕೆಂದರೆ ಇಸ್ಲಾಂ ನ ಕಾನೂನು ಬಡ್ಡಿ ತೆಗೆದುಕೊಳ್ಳುವುದನ್ನು ನಿಷೇಧಿಸಿದೆ. ಆದ್ದರಿಂದ ಶರಿಯತ್ ಕೋರ್ಟ್ ಕಾನೂನಿನ ಪ್ರಕಾರವೇ ಮ್ಯುಚುಯಲ್ ಫಂಡ್ ನ ನಿಯಮಗಳನ್ನೇ ಬದಲಿಸಿಬಿಟ್ಟರೆ ಬಾಂಧವರನ್ನು ಮೆಚ್ಚಿಸಬಹುದು. ಇಸ್ಲಾಂ ಧಾರ್ಮಿಕ ಕಾನೂನಿನ ಪ್ರಕಾರ ಕಾಫಿರರು ಬದುಕಿರಲೇಬಾರದೆಂಬ ಕಾನೂನಿದೆ ಹಾಗಿದ್ದರೆ ಭಾರತದಲ್ಲಿರುವ ಮುಸ್ಲಿಮೇತರರನ್ನು ಕೊಂದುಬಿಡಬಹುದೇ?

ಮ್ಯುಚುಯಲ್ ಫಂಡ್ ಯೋಜನೆ ರೂಪಿಸಿದ ಮಹಾನುಭಾವರು ಯೋಚಿಸಲೇಬೇಕಾದ ಪ್ರಮುಖ ಅಂಶವಿದು. ಭಾರತದ ಮುಸ್ಲಿಂ ಜನಸಂಖ್ಯೆಯಲ್ಲಿ ಬ್ಯಾಂಕಿಂಗ್ ನಿಂದ ದೂರ ಉಳಿದವರನ್ನು ಬ್ಯಾಂಕ್ ವ್ಯವಸ್ಥೆಯೊಂದಿಗೆ ಜೋಡಿಸಲು ಇರುವುದು ಇದೊಂದೇ ಮಾರ್ಗವೇ? ಹಾಗಿದ್ದರೆ ಪ್ರಧಾನಿ ಇತ್ತೀಚೆಗಷ್ಟೇ ಚಾಲನೆ ನೀಡಿದ್ದ ಜನ್ ಧನ್ ಯೋಜನೆ ಯಾವ ಪುರುಷಾರ್ಥಕ್ಕೆ? ಜನ್-ಧನ್ ಯೋಜನೆಗೂ ಕೂಡ ಮುಸ್ಲಿಂ ಸಮುದಾಯದವರನ್ನು ಬ್ಯಾಂಕ್ ನೊಂದಿಗೆ ಜೋಡಿಸಲು ಸಾಧ್ಯವಾಗಿಲ್ಲ ಎಂದರೆ ಮುಸ್ಲಿಮರು ಭಾರತ ಸರ್ಕಾರದ ಯೋಜನೆಗಳನ್ನು ಧಿಕ್ಕರಿಸುತ್ತಿರಬೇಕು. ಇಲ್ಲ ಆ ಯೋಜನೆಗಳಿಗೆ ಮುಸ್ಲಿಂ ಸಮುದಾಯದವರನ್ನು ತಲುಪಲು ಸಾಧ್ಯವಾಗದೇ ಇರಬೇಕು. ಇದರಲ್ಲಿ ಯಾವುದು ಸತ್ಯ?

ಪ್ರತಿಯೊಂದೂ ಶರಿಯತ್ ನಂತೆಯೇ ನಡೆಯಬೇಕು ಎಂದಿದ್ದರೆ ಅದಕ್ಕಾಗಿಯೇ ಪಾಕಿಸ್ತಾನದಂತಹ ಪ್ರತ್ಯೇಕ ರಾಷ್ಟ್ರಗಳಿವೆ ಅಲ್ಲಿ ಮುಂದುವರೆಸಲಿ. ಆದರೆ ಭಾರತದ ಪ್ರಜಾಪ್ರಭುತ್ವವನ್ನು ಒಪ್ಪಿಯೂ, ಇಲ್ಲಿನ ಕಾನೂನನ್ನು ತಿರಸ್ಕರಿಸಿ ತಮ್ಮದೇ ಮತ್ತೊಂದು ಕಾನೂನು ಬೇಕೆಂದು ಪಟ್ಟುಹಿಡಿಯುವವರು ದೇಶಧ್ರೋಹಿಗಳಲ್ಲದೇ ಮತ್ತೇನು? ಎಲ್ಲರಿಗೂ ಒಂದೇ ಕಾನೂನು, ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂದು ಇಡೀ ದೇಶವೇ ಒಂದಾಗಿರಲು ಬಯಸುತ್ತಿದ್ದರೆ ಅಧಿಕಾರಿ ವರ್ಗದಲ್ಲೇ ಶರಿಯತ್ ಕಾನೂನು, ಫತ್ವಾ ಗಳಿಗೆ ಅನುಗುಣವಾಗಿ ಯೋಜನೆ, ಕಾರ್ಯಕ್ರಮ, ಮ್ಯುಚುಯಲ್ ಫಂಡ್ ಇತ್ಯಾದಿಗಳನ್ನು ಪ್ರಾರಂಭಿಸುವ ಭಯಂಕರ ಆಲೋಚನೆ ಮೂಡಿದರೆ ಭಾರತ ಶ್ರೇಷ್ಠವಾಗಬಹುದೇನೋ ಗೊತ್ತಿಲ್ಲ. ಆದರೆ ಏಕ್ ಭಾರತ್ ಶ್ರೇಷ್ಠ್ ಭಾರತ್ ಆಗುವುದಕ್ಕಂತೂ ಸಾಧ್ಯವಿಲ್ಲ. ಹಾಗೂ ಭಾರತವನ್ನು ಏಕ್ ಎಂದು ಹೇಳುವ ಅವಕಾಶವೂ ಉಳಿಯುವುದಿಲ್ಲ! ಎಚ್ಚರ                  

No comments:

Post a Comment